17-10-2016, 11:25 AM
ಬೆಂಗಳೂರು, ಜು.02 : ಕರ್ನಾಟಕ ಲೋಕಾಯುಕ್ತದಲ್ಲಿ ನಡೆದಿದೆ ಎನ್ನಲಾದ ಹಣದ ಬೇಡಿಕೆ ಪ್ರಕರಣದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಸರ್ಕಾರ ಪ್ರಕರಣದ ತನಿಖೆಗೆ ವಿಶೇಷ ತನಿಖಾ ದಳವನ್ನು ರಚನೆ ಮಾಡಿದೆ. ಲೋಕಾಯುಕ್ತ ನ್ಯಾ.ಭಾಸ್ಕರರಾವ್ ಪುತ್ರ ಅಶ್ವಿನ್ ರಾವ್ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬುದು ಆರೋಪವಾಗಿದೆ.
ಲೋಕಾಯುಕ್ತದಲ್ಲಿ ನಡೆದ ಈ ಹಗರಣದ ಬಗ್ಗೆ ಲೋಕಾಯುಕ್ತ ಎಸ್ಪಿ ಸೋನಿಯಾ ನಾರಂಗ್ ತನಿಖೆ ನಡೆಸುತ್ತಿದ್ದರು. ಆದರೆ, ಅಶ್ವಿನ್ ರಾವ್ ಹೈಕೋರ್ಟ್ ಮೆಟ್ಟಿಲೇರಿ ತನಿಖೆಗೆ ತಡೆಯಾಜ್ಞೆ ತಂದಿದ್ದಾರೆ. ಎಸ್ಐಟಿ ತನಿಖೆ ನಡೆಸಲಿ ಎಂದು ಕೋರ್ಟ್ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ. [ಲೋಕಾಯುಕ್ತ ಹಗರಣ : ಯಾರು, ಏನು ಹೇಳಿದರು?]
ಪ್ರತಿಪಕ್ಷಗಳು ಮತ್ತು ವಿವಿಧ ಸಂಘಟನೆಗಳು ಲೋಕಾಯುಕ್ತ ನ್ಯಾ.ಭಾಸ್ಕರರಾವ್ ರಾಜೀನಾಮೆಗೆ ಒತ್ತಾಯಿಸುತ್ತಿವೆ. ಆದರೆ, ಸದ್ಯಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಎಂದು ಪ್ರತಿಪಕ್ಷಗಳು ಪಟ್ಟು ಹಿಡಿದಿವೆ. [ಲೋಕಾಯುಕ್ತದಲ್ಲೇ ಭ್ರಷ್ಟಾಚಾರ, ಮುಂದೇನು?]
2015ರ ಮೇ 11ರಂದು ಲೋಕಾಯುಕ್ತ ಎಸ್ಪಿ ಸೋನಿಯಾ ನಾರಂಗ್ ಬರೆದ ಪತ್ರದಿಂದ ಈ ಹಗರಣ ಬೆಳಕಿಗೆ ಬಂದಿದೆ. ಸರ್ಕಾರಿ ಅಧಿಕಾರಿಯೊಬ್ಬರ ಮನೆ ಮೇಲೆ ನಡೆಯುವ ದಾಳಿ ತಪ್ಪಿಸಲು 1 ಕೋಟಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎಂಬುದು ಆರೋಪವಾಗಿದೆ. ಹಗರಣದ ವಿವರಗಳು ಚಿತ್ರಗಳಲ್ಲಿ
ಲೋಕಾಯುಕ್ತ ಕಚೇರಿಯಲ್ಲಿ ಏನಾಗಿತ್ತು?
'ನಿಮ್ಮ ಮೇಲೆ ದಾಳಿ ನಡೆಯಲಿದೆ, ದಾಖಲೆಗಳನ್ನು ಸಂಗ್ರಹಣೆ ಮಾಡಲಾಗಿದೆ. ದಾಳಿ ತಪ್ಪಿಸಬೇಕಾದರೆ 1 ಕೋಟಿ ಕೊಡಿ' ಎಂದು ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಎಂಜಿನಿಯರ್ ಕೃಷ್ಣಮೂರ್ತಿ ಎಂಬುವವರಿಂದ ಕೃಷ್ಣರಾವ್ ಎಂಬುವವರು ಹಣ ಕೇಳಿದ್ದರು. ಕೃಷ್ಣರಾವ್ ಹಣ ಕೇಳಿದ್ದಾರೆ ಎಂದು ಕೃಷ್ಣಮೂರ್ತಿ ಅವರು ಸೋನಿಯಾ ನಾರಂಗ್ ಅವರ ಬಳಿ ಮೌಖಿಕವಾಗಿ ಹೇಳಿಕೊಂಡಿದ್ದರು. ಇದರಿಂದ ಪ್ರಕರಣ ಬಹಿರಂಗಗೊಂಡಿತ್ತು.
ಲೋಕಾಯುಕ್ತದಲ್ಲಿ ನಡೆದ ಈ ಹಗರಣದ ಬಗ್ಗೆ ಲೋಕಾಯುಕ್ತ ಎಸ್ಪಿ ಸೋನಿಯಾ ನಾರಂಗ್ ತನಿಖೆ ನಡೆಸುತ್ತಿದ್ದರು. ಆದರೆ, ಅಶ್ವಿನ್ ರಾವ್ ಹೈಕೋರ್ಟ್ ಮೆಟ್ಟಿಲೇರಿ ತನಿಖೆಗೆ ತಡೆಯಾಜ್ಞೆ ತಂದಿದ್ದಾರೆ. ಎಸ್ಐಟಿ ತನಿಖೆ ನಡೆಸಲಿ ಎಂದು ಕೋರ್ಟ್ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ. [ಲೋಕಾಯುಕ್ತ ಹಗರಣ : ಯಾರು, ಏನು ಹೇಳಿದರು?]
ಪ್ರತಿಪಕ್ಷಗಳು ಮತ್ತು ವಿವಿಧ ಸಂಘಟನೆಗಳು ಲೋಕಾಯುಕ್ತ ನ್ಯಾ.ಭಾಸ್ಕರರಾವ್ ರಾಜೀನಾಮೆಗೆ ಒತ್ತಾಯಿಸುತ್ತಿವೆ. ಆದರೆ, ಸದ್ಯಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಎಂದು ಪ್ರತಿಪಕ್ಷಗಳು ಪಟ್ಟು ಹಿಡಿದಿವೆ. [ಲೋಕಾಯುಕ್ತದಲ್ಲೇ ಭ್ರಷ್ಟಾಚಾರ, ಮುಂದೇನು?]
2015ರ ಮೇ 11ರಂದು ಲೋಕಾಯುಕ್ತ ಎಸ್ಪಿ ಸೋನಿಯಾ ನಾರಂಗ್ ಬರೆದ ಪತ್ರದಿಂದ ಈ ಹಗರಣ ಬೆಳಕಿಗೆ ಬಂದಿದೆ. ಸರ್ಕಾರಿ ಅಧಿಕಾರಿಯೊಬ್ಬರ ಮನೆ ಮೇಲೆ ನಡೆಯುವ ದಾಳಿ ತಪ್ಪಿಸಲು 1 ಕೋಟಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎಂಬುದು ಆರೋಪವಾಗಿದೆ. ಹಗರಣದ ವಿವರಗಳು ಚಿತ್ರಗಳಲ್ಲಿ
ಲೋಕಾಯುಕ್ತ ಕಚೇರಿಯಲ್ಲಿ ಏನಾಗಿತ್ತು?
'ನಿಮ್ಮ ಮೇಲೆ ದಾಳಿ ನಡೆಯಲಿದೆ, ದಾಖಲೆಗಳನ್ನು ಸಂಗ್ರಹಣೆ ಮಾಡಲಾಗಿದೆ. ದಾಳಿ ತಪ್ಪಿಸಬೇಕಾದರೆ 1 ಕೋಟಿ ಕೊಡಿ' ಎಂದು ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಎಂಜಿನಿಯರ್ ಕೃಷ್ಣಮೂರ್ತಿ ಎಂಬುವವರಿಂದ ಕೃಷ್ಣರಾವ್ ಎಂಬುವವರು ಹಣ ಕೇಳಿದ್ದರು. ಕೃಷ್ಣರಾವ್ ಹಣ ಕೇಳಿದ್ದಾರೆ ಎಂದು ಕೃಷ್ಣಮೂರ್ತಿ ಅವರು ಸೋನಿಯಾ ನಾರಂಗ್ ಅವರ ಬಳಿ ಮೌಖಿಕವಾಗಿ ಹೇಳಿಕೊಂಡಿದ್ದರು. ಇದರಿಂದ ಪ್ರಕರಣ ಬಹಿರಂಗಗೊಂಡಿತ್ತು.